ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು:

ಚಿತ್ರದುರ್ಗ, ಮೇ 15- ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು ಸಾಧಿಸಿದ್ದಾರೆ.
ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯಿಂದ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಿ ಶಾಸಕ ತಿಪ್ಪೇಸ್ವಾಮಿ ವಿರುದ್ಧ 25,000ಕ್ಕೂ ಮತಗಳ ಅಂತರದಿಂದ ಗೆಲುವಿನ ಕೇಕೆ ಹಾಕಿದ್ದು ಇದು ಕಮಲ ಪಾಳಯದಲ್ಲಿ ಸಂಚಲನ ಉಂಟು ಮಾಡಿದೆ.
ಭಾರೀ ವಾಕ್ಸಮರದ ನಡುವೆ ಕಾಂಗ್ರೆಸ್ ಹಾಗೂ ತಿಪ್ಪೇಸ್ವಾಮಿ ಅವರ ಪ್ರಬಲ ಸ್ಪರ್ಧೆ ನಡುವೆ ರಾಮುಲು ಗೆಲುವು ಸಾಧಿಸಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಈ ಗೆಲುವಿಗೆ ಶ್ರೀರಾಮುಲು ಸಂತಸ ವ್ಯಕ್ತಪಡಿಸಿದ್ದು , ಜನರು ಕೇಂದ್ರದಲ್ಲಿರುವ ಮೋದಿಯವರ ಜನಪರ ಆಡಳಿತಕ್ಕೆ ಮನ್ನಣೆ ನೀಡಿದ್ದಾರೆ. ಬಿಜೆಪಿ ಮತ್ತೆ ಕರ್ನಾಟಕದಲ್ಲಿ ಆಡಳಿತಕ್ಕೆ ಬರುತ್ತಿರುವುದು ಇದು 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರ ವಿಜಯಯಾತ್ರೆ ಮುಂದುವರೆಯುತ್ತದೆ ಎಂಬ ಮುನ್ಸೂಚನೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ