ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಮೇ 16-ಸಂಖ್ಯಾಬಲ ಇರುವ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಅವಕಾಶ ನೀಡದಿದ್ದರೆ ರಾಜ್ಯಾದ್ಯಂತ ಬೀದಿಗಿಳಿದು ಜನ ಹೋರಾಟ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಲು ಅನುಮತಿಸಿ ಎಲ್ಲಾ ಶಾಸಕರು ಪತ್ರಕ್ಕೆ ಸಹಿ ಹಾಕಿಕೊಟ್ಟಿದ್ದಾರೆ.

ಅದನ್ನು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹಸ್ತಾಂತರಿಸಲಿದ್ದಾರೆ. ರಾಜ್ಯಪಾಲರು ಬಹುಮತ ಇರುವ ಪಕ್ಷಗಳಿಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು,. ಯಾವುದೇ ಕಾರಣಕ್ಕೂ ಅತಿ ದೊಡ್ಡ ಪಕ್ಷ ಎಂಬ ಕಾರಣಕೆhಕ ಬಿಜೆಪಿಗೆ ಅವಕಾಶ ನೀಡಬಾರದು. ಒಂದು ವೇಳೆ ಆ ರೀತಿ ನಿರ್ಣಯ ಕೈಗೊಂಡರೆ ಅದು ಪ್ರಜಾಪ್ರಭುತ್ವದ ವಿರೋಧಿ ಕೃತ್ಯವಾಗುತ್ತದೆ. ಕಾಂಗ್ರೆಸ್ ಅದನ್ನು ಬಲವಾಗಿ ವಿರೋಧಿಸಲಿದೆ.
ಜನ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸುತ್ತಾರೆ. ಮುಂದಿನ ಪರಿಣಾಮವನ್ನು ಕೇಂದ್ರ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ