
ಬೆಂಗಳೂರು,ಮೇ 17
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಗುರುವಾರ ಬೆಳಿಗ್ಗೆ 9ಕ್ಕೆ ಪ್ರಮಾಣ ವಚನ ಸ್ವೀಕಾಕರಿಸಿದರು.
ರಾಜಭವನ ಗಾಜಿನ ಮನೆಯಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ 3ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕಾರಕ್ಕೆ ಮುನ್ನ ಯಡಿಯೂರಪ್ಪನವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು. ದೇವಾಲಯದಲ್ಲಿ ಯಡಿಯೂರಪ್ಪ ಆಗಮನ ಹಿನ್ನೆಲೆಯಲ್ಲಿ ಹೂಗಳ ಅಲಂಕಾರ ಮತ್ತು ಸಕಲ ಸಿದ್ದತೆ ಮಾಡಲಾಗಿತ್ತು.
ಇನ್ನೊಂದೆಡೆ ಯಡಿಯೂರಪ್ಪ ನಿವಾಸ ಬೆಂಗಳೂರಿನ ಡಾಲರ್ಸ್ ಕಾಲನಿಯ ಧವಳಗಿರಿಯಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿತ್ತು. ಕಳೆದ ಮಧ್ಯರಾತ್ರಿಯಿಂದ ಪೊಲೀಸ್ ಸಿಬ್ಬಂದಿ ಕಾವಲು ಕಾಯುತ್ತಿದ್ದು ನಿವಾಸದ ಗೇಟ್ ಬಳಿ ಮೆಟಲ್ ಡಿಟೆಕ್ಟರ್ ನ್ನು ಅಳವಡಿಸಲಾಗಿದೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ನಾಮಫಲಕವನ್ನು ಬದಲಿಸಲು ವ್ಯವಸ್ಥೆ ಮಾಡಲಾಗುತ್ತಿದೆ