ವಿಶ್ವಾಸ ಮತಯಾಚನೆಯಲ್ಲಿ ನಿರೀಕ್ಷಿಗೂ ಮೀರಿ ಗೆಲ್ಲುತ್ತೇವೆ: ಸಂಸದ ಶ್ರೀರಾಮುಲು

 

ಬೆಂಗಳೂರು, ಮೇ 17- ವಿಶ್ವಾಸ ಮತಯಾಚನೆ ವೇಳೆ ನೀವು ನಿರೀಕ್ಷಿಸಿದಷ್ಟು ಹೆಚ್ಚು ಸಂಖ್ಯೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಸಂಸದ ಶ್ರೀರಾಮುಲು ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾದೇಶ ನಮ್ಮ ಪರವಾಗಿದೆ. ಅನೇಕರು ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸರ್ಕಾರ ರಚಿಸಲು ಮುಂದಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಫಲ ಬಿಜೆಪಿಗೆ ಸಿಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಮುಂದಿನ ಐದು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಜನರ ಆಶೋತ್ತರಕ್ಕೆ ತಕ್ಕಂತೆ ದುಡಿಯುತ್ತೇವೆ ಎಂದು ಅವರು ಹೇಳಿದರು.

ಪಕ್ಷೇತರ ಅಭ್ಯರ್ಥಿಗಳು ನನ್ನ ಜತೆ ಇದ್ದಾರೆ. ಬೇರ ಪಕ್ಷದವರೂ ಸಂಪರ್ಕದಲ್ಲಿದ್ದು, ಯಾರೂ ಊಹಿಸದ ರೀತಿಯಲ್ಲಿ ನಾವು ಬಹುಮತ ಸಾಬೀತುಪಡಿಸುತ್ತೇವೆ ಎಂದರು.

ಪ್ರತಿಪಕ್ಷಗಳು ಏನೇ ಕುತಂತ್ರ ಮಾಡಿದರೂ ಅವರ ತಂತ್ರ ಫಲಿಸುವುದಿಲ್ಲ. ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ನಾವು ಸರ್ಕಾರ ರಚಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಶ್ರೀರಾಮುಲು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ