ನೀರಿನ ಹೊಂಡದಲ್ಲಿ ಬಿದ್ದು ಯುವತಿ ಆತ್ಮಹತ್ಯೆ!

ಗದಗ, ಮೇ 17- ನೀರಿನ ಹೊಂಡದಲ್ಲಿ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ವೀರನಾರಾಯಣ ದೇವಾಲಯ ಬಳಿಯ ಕೊನ್ನೇರಿ ಕಲ್ಯಾಣಿಯಲ್ಲಿ ಬಿದ್ದು ಜ್ಯೋತಿ ಕೋಟಿ (29) ಎಂಬಾಕೆ ಮೃತಪಟ್ಟಿದ್ದಾಳೆ. ಈ ಯುವತಿಗೆ ವಿವಾಹ ನಿಶ್ಚಯವಾಗಿತ್ತು. ಮದುವೆಗೆ ಇನ್ನು ಎರಡು ತಿಂಗಳು ಬಾಕಿ ಇದ್ದು, ಇದ್ದಕ್ಕಿದ್ದಂತೆ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಲ್ಲಿನ ಶಹರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ