ಹಂಗಾಮಿ ಸ್ಪೀಕರ್ ಆಗಿ ಉಮೇಶ್ ಕತ್ತಿ ನೇಮಕ ಸಾಧ್ಯತೆ

ಬೆಂಗಳೂರು,ಮೇ 18

ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಳ ಅಧಿವೇಶನ ನಡೆಯುವ ಹಿನ್ನೆಲೆ ಹಂಗಾಮಿ ಸ್ಪೀಕರ್ ಅನ್ನಾಗಿ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಜೇಷ್ಠತೆ ಆಧಾರದಲ್ಲಿ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಅನ್ನಾಗಿ ಆಯ್ಕೆ ಮಾಡುವುದು ವಾಡಿಕೆಯಲ್ಲಿದೆ. ಇದನ್ನು ಅನುಸರಿಸಿದರೆ 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಅನ್ನಾಗಿ ನೇಮಕ ಮಾಡಬೇಕು. ಆದರೆ ಇದು ಬಿಜೆಪಿಗೆ ಇಷ್ಟವಿಲ್ಲ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಕತ್ತಿ ಅವರನ್ನು ನೇಮಕ ಮಾಡಲು ಬಿಜೆಪಿ ಉತ್ಸುಕತೆ ತೋರಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ