ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ವಿರುದ್ಧದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮೇ19

ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶನಿವಾರ ವಜಾ ಮಾಡಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್​ ಆಗಿ ಮುಂದುವರಿಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ.

ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್​ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು,  ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ