ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅಂಟಿಕೊಂಡಿದ್ದ ಕಳಂಕವನ್ನು ಶುದ್ಧೀಕರಣಗೊಳಿಸಿಕೊಳ್ಳಲು ನನ್ನ ಪುತ್ರನಿಗೆ ಅವಕಾಶ ಸಿಕ್ಕಿದೆ; ಹೆಚ್ ಡಿ ದೇವೇಗೌಡ

ಬೆಂಗಳೂರು: ಮೇ-20: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅಂಟಿಕೊಂಡಿದ್ದ ಕಳಂಕವನ್ನು ಶುದ್ಧೀಕರಣಗೊಳಿಸಿಕೊಳ್ಳಲು ನನ್ನ ಪುತ್ರನಿಗೆ ಅವಕಾಶ ಸಿಕ್ಕಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ,

ಸುದ್ದಿ ವಾಹಿನಿಯೊಂದರ ಸಂದರ್ಶನವೊದರಲ್ಲಿ ಮಾತನಾಡಿರುವ ಅವರು, ಅಧಿಕಾರಕ್ಕೆ ಬರುತ್ತಿರುವ ಸಂತೋಷಕ್ಕಿಂತಲೂ, ಜಾತ್ಯಾತೀತ ತತ್ವಗಳಡಿ ಸರ್ಕಾರ ರಚನೆಗೆ ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸಿದರೆ ಕುಮಾರಸ್ವಾಮಿ ನನ್ನ ಪುತ್ರನೇ ಅಲ್ಲ ಎಂದು ಮನೆಯಿಂದ ಹೊರ ಹಾಕುವುದಾಗಿ ಈ ಹಿಂದೆ ಹೇಳಿದ್ದೆ. ಆದರೆ, ದೇವರ ದಯೆ ಅಂತಹ ಯಾವುದೇ ಪರಿಸ್ಥಿತಿಗಳು ಉದ್ಭವಿಸಲಿಲ್ಲ. ಬಿಜೆಪಿ ಜೊತೆಗೆ ಕೈ ಜೋಡಿಸಿದ್ದಿದ್ದರೆ, ಜೆಡಿಎಸ್ ಪಕ್ಷದ ಪ್ರತಿಷ್ಠೆಗೂ ಕುಂದುಂಟಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ