ಬಸವನಬಾಗೇವಾಡಿಯಲ್ಲಿ ವಿವಿಪ್ಯಾಟ್ ಸಿಕ್ಕಿರುವ ಬಗ್ಗೆ ಸಂಪೂರ್ಣ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ:

ಮೈಸೂರು,ಮೇ 21- ಬಸವನಬಾಗೇವಾಡಿಯಲ್ಲಿ ವಿವಿಪ್ಯಾಟ್ ಸಿಕ್ಕಿರುವ ಬಗ್ಗೆ ಸಂಪೂರ್ಣ ತನಿಖೆಯಾಗಬೇಕೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರಗಳಿಗೆ ಭದ್ರತೆ ನೀಡಬೇಕಾಗಿದ್ದ ಸರ್ಕಾರ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಕಳೆದ ಚುನಾವಣೆಯಲ್ಲಿ 130 ಸ್ಥಾನಗಳನ್ನು ಗಳಿಸಿದ ಕಾಂಗ್ರೆಸ್ ಈ ಬಾರಿ 78 ಸ್ಥಾನಗಳಲ್ಲಿ ಜಯಗಳಿಸಿದೆ. ಇದನ್ನು ನೋಡಿದರೆ ಜನತೆ ಕಾಂಗ್ರೆಸ್ ವಿರುದ್ದ ಇದ್ದಾರೆ ಎಂಬುದು ತಿಳಿಯುತ್ತದೆ ಎಂದರು. ಮುಂದಿನ ಚುನಾವಣೆ ಎದುರಿಸಲು ನಾವು ಸಿದ್ಧರಾಗುತ್ತಿದ್ದೇವೆ. ಬಿಜೆಪಿಗೆ ಈ ಬಾರಿಯ ಚುನಾವಣಾ ಫಲಿತಾಂಶ ಸಂತಸ ತಂದಿದೆ ಎಂದು ಕರಂದ್ಲಾಜೆ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ