
ಮೈಸೂರು, ಮೇ 22- ಕಾಡಿನಿಂದ ಹೊರ ಬಂದ ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕರಡಿಗಳ ಕಾದಾಟದಿಂದ ಗಂಡು ಕರಡಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹಾದನೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಇಲ್ಲಿ ಮೃತ ಕರಡಿಯ ದೇಹ ಪತ್ತೆಯಾಗಿದೆ.
ಈ ಸಂಬಂಧ ಸ್ಥಳಕ್ಕೆ ಯಡಿಯಾಲ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮೃತ ಕರಡಿ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಕರಡಿ ಸಾವಿನ ಕಾರಣ ತಿಳಿದು ಬರಲಿದೆ.