ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಮೃತ

ಮೈಸೂರು, ಮೇ 22- ಕಾಡಿನಿಂದ ಹೊರ ಬಂದ ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕರಡಿಗಳ ಕಾದಾಟದಿಂದ ಗಂಡು ಕರಡಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹಾದನೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಇಲ್ಲಿ ಮೃತ ಕರಡಿಯ ದೇಹ ಪತ್ತೆಯಾಗಿದೆ.
ಈ ಸಂಬಂಧ ಸ್ಥಳಕ್ಕೆ ಯಡಿಯಾಲ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮೃತ ಕರಡಿ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಕರಡಿ ಸಾವಿನ ಕಾರಣ ತಿಳಿದು ಬರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ