ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ವಿಶೇಷ ಪೂಜೆ ಸಲ್ಲಿಸಿದ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಮೈಸೂರು:ಮೇ-23: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ಶ್ರೀ ಚಾಮುಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪತ್ನಿ ಅನಿತಾ ಜೊತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನಾ ಶಕ್ತಿ ದೇವತೆಯ ದರ್ಶನ ಪಡೆದರು. ಈ ವೇಳೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚುನಾವಣಾ ಪೂರ್ವದಲ್ಲಿ ಕುಮಾರಪರ್ವ ಕಾರ್ಯಕ್ರಮಕ್ಕೂ ಚಾಮುಂಡಿಬೆಟ್ಟದಿಂದಲೇ ಚಾಲನೆ‌ ನೀಡಿದ್ದ ಹೆಚ್‌ಡಿಕೆ, ಅಂದು ಸಹ ನಾಡದೇವತೆಗೆ ಪೂಜೆ ಸಲ್ಲಿಸಿ ರಾಜ್ಯಪ್ರವಾಸ ಆರಂಭಿಸಿದ್ದರು. ಈ ಹಿನ್ನಲೆಯಲ್ಲಿ ಇಂದು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ನಾಡದೇವತೆಗೆ ಪೂಜೆ ಸಲ್ಲಿಸಿ, ಸುಗಮ ಆಡಳಿತ ನಡೆಸಲು ಚಾಮುಂಡೇಶ್ವರಿಯ ಮೊರೆಹೋಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ