ಮಹಿಳೆಯ ಕೊರಳಲ್ಲಿದ್ದ 26 ಗ್ರಾಂ ಸರ ಕಿತ್ತುಕೊಂಡು ಪರಾರಿ

 

ಬೆಂಗಳೂರು, ಮೇ 26-ತಮಿಳುನಾಡಿನಿಂದ ನಗರಕ್ಕೆ ವಾಪಸಾದ ಮಹಿಳೆ ಮನೆಗೆ ಆಟೋದಲ್ಲಿ ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಆಟೋ ಅಡ್ಡಗಟ್ಟಿ ಮಹಿಳೆಯ ಕೊರಳಲ್ಲಿದ್ದ 26 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಾಯತ್ರಿನಗರ ನಿವಾಸಿ ಲಕ್ಷ್ಮಿ ಎಂಬುವವರು ಕಾರ್ಯನಿಮಿತ್ತ ತಮಿಳುನಾಡಿಗೆ ಹೋಗಿದ್ದರು. ಇಂದು ಬೆಳಗಿನ ಜಾವ ಬಸ್‍ನಲ್ಲಿ ನಗರಕ್ಕೆ ವಾಪಸಾಗಿದ್ದಾರೆ.
ಮೆಜೆಸ್ಟಿಕ್‍ನಲ್ಲಿ ಬಸ್ ಇಳಿದ ಇವರು ಗಾಯತ್ರಿ ನಗರಕ್ಕೆ ಹೋಗುವ ಸಲುವಾಗಿ ಬೆಳಗಿನ ಜಾವ 3.15ರಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಆಟೋ ಹತ್ತಿ ಮನೆಗೆ ಹೋಗುತ್ತಿದ್ದರು.
ಈ ವೇಳೆ ಬೈಕ್‍ನಲ್ಲಿ ಇಬ್ಬರು ದರೋಡೆಕೋರರು ಹಿಂಬಾಲಿಸಿಕೊಂಡು ಬಂದು ಆಟೋವನ್ನು ಅಡ್ಡಗಟ್ಟಿ ಚಾಲಕನ ಬಳಿ ಹಣ ಕೇಳಿದ್ದಾರೆ.
ಹಣ ಇಲ್ಲ ಎಂದು ಹೇಳಿದಾಗ ದರೋಡೆಕೋರರು ಸುಮ್ಮನಾಗದೆ ಆಟೋದಲ್ಲಿದ್ದ ಮಹಿಳೆಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಶ್ರೀರಾಂಪುರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ದರೋಡೆಕೋರರಿಗಾಗಿ ಶೋಧ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ