ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ, ಓರ್ವ ಸ್ಥಳದಲ್ಲೇ ಮೃತ

ಚಿಕ್ಕಬಳ್ಳಾಪುರ, ಮೇ 27-ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಡಿಬಂಡೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀನಿವಾಸ್ (35) ಮೃತ ದುರ್ದೈವಿ. ಬಾಲಕಾಮೇಶ್ವರ್, ಹರಿಹರ, ಕಾಮಾಕ್ಷಿ ತೀವ್ರವಾಗಿ ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಬೆಂಗಳೂರಿನಿಂದ ಹೈದರಾಬಾದ್ ಕಡೆಗೆ ಹೋಗುತ್ತಿದ್ದ ವ್ಯಾಗನಾರ್ ಕಾರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ತೆರಳುತ್ತಿದ್ದಾಗ ಬೀಚಗಾನಹಳ್ಳಿ ಕ್ರಾಸ್ ಬಳಿ ಟಯರ್ ಪಂಕ್ಚರ್ ಆಗಿದ್ದರಿಂದ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶ್ರೀನಿವಾಸ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಗುಡಿಬಂಡೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ