ಊಟಿಯಲ್ಲಿ ಬಸ್‌ ಪ್ರಪಾತಕ್ಕೆ ಉರುಳಿ ಬೆಂಗಳೂರಿನ ನಾಲ್ವರು ದುರ್ಮರಣ 

ನೀಲಗಿರಿ,ಮೇ 27

ತಮಿಳುನಾಡಿನ ಊಟಿ ಬಳಿಯ ತಾವಲಾಮಲೈ ಎಂಬಲ್ಲಿ  ಬೆಂಗಳೂರಿಗರ ಪ್ರವಾಸಿಗರ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇತರೆ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅವಘಡ ಶನಿವಾರ ರಾತ್ರಿ ನಡೆದಿದೆ.

ಬೆಂಗಳರೂರಿನಿಂದ ತೆರಳಿದ್ದ ಪ್ರವಾಸಿಗರ ಬಸ್‌ ಬೆಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಲವು ಸುತ್ತು ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ,ಇನ್ನಿಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಬಸ್‌ನಲ್ಲಿ ಒಟ್ಟು 29 ಮಂದಿ ಪ್ರವಾಸಿಗರಿದರು  ತೆರಳಿದ್ದರು ಎಂದು ತಿಳಿದು ಬಂದಿದ್ದು, ಮೃತರ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ