ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಜನರ ಬೆಂಬಲ ನಮ್ಮ ಜವಾಬ್ದಾರಿ ನಿರ್ವಹಣೆಗೆ ನೈತಿಕವಾದ ಬೆಂಬಲ ಕೊಡಲಿದೆ: ಸಿಎಂ

ಬೆಂಗಳೂರು, ಮೇ 27- ರಾಜರಾಜೇಶ್ವರಿನಗರ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿಯ ಬೆಂಬಲ ನೀಡಬೇಕು ಎಂಬುದನ್ನು ಆ ಕ್ಷೇತ್ರದ ಜನರು ತೀರ್ಮಾನಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಜನರ ಬೆಂಬಲ ನಮ್ಮ ಜವಾಬ್ದಾರಿ ನಿರ್ವಹಣೆಗೆ ನೈತಿಕವಾದ ಬೆಂಬಲ ಕೊಡಲಿದೆ. ಅದಕ್ಕೆ ಪೂರಕವಾಗಿ ಜನರು ತೀರ್ಮಾನಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ನಿರ್ವಹಿಸುತ್ತಿದ್ದು, ಆ ಕ್ಷೇತ್ರದ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂಬಂಧ ಈ ರೀತಿ ಪ್ರತಿಕ್ರಿಯೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ