ಜವಾಹರ್ ಲಾಲ್ ನೆಹರು ಅವರ 54ನೇ ಪುಣ್ಯತಿಥಿ: ಮುಖ್ಯಮಂತ್ರಿ ಪುಷ್ಪ ನಮನ

 

ಬೆಂಗಳೂರು, ಮೇ 27- ಜವಾಹರ್ ಲಾಲ್ ನೆಹರು ಅವರು ಪ್ರಧಾನಿಯಾಗಿ ದೇಶದ ಅಭ್ಯುದಯಕ್ಕೆ ಶ್ರಮಿಸಿದವರು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ವಿಧಾನಸೌಧದ ಬಳಿಯ ನೆಹರು ಪ್ರತಿಮೆಗೆ ಅವರ 54ನೇ ಪುಣ್ಯತಿಥಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಪ್ರಧಾನಿಯಾಗಿ ಉತ್ತಮ ಕೆಲಸ ಮಾಡಿರುವ ಅವರು ಪಂಚವಾರ್ಷಿಕ ಯೋಜನೆಯನ್ನು ಜಾರಿಗೆ ತಂದು ದೇಶದ ಅಭಿವೃದ್ಧಿಗೆ ಕಾರಣರಾದರು. ಕೈಗಾರಿಕೆ ಸಹಕಾರ ಕ್ಷೇತ್ರದಲ್ಲೂ ದೇಶ ಉತ್ತಮ ಬೆಳವಣಿಗೆ ಸಾಧಿಸಲು ಮುನ್ನುಡಿ ಬರೆದವರು ಎಂದು ಗುಣಗಾನ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ