ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮೇ 30- ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ 22ಖಾತೆ ಹಾಗೂ ಜೆಡಿಎಸ್‍ಗೆ 12 ಖಾತೆ ಹಂಚಿಕೆಯಾಗಿದೆ. ಉತ್ತಮ ಆಡಳಿತ ನೀಡಬೇಕು ಎಂಬುದು ನಮ್ಮ ಮುಂದಿರುವ ಗುರಿ. ರೈತರ ಸಭೆಯಲ್ಲಿ ಸಾಲ ಮನ್ನಾ ಹಾಗೂ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಲಹೆ, ಸೂಚನೆಗಳನ್ನು ಪಡೆಯಲಾಗುವುದು ಎಂದರು.

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ವಿದೇಶದಲ್ಲಿದ್ದರೂ ದೂರವಾಣಿ ಮೂಲಕ ಅವರ ಸಂಪರ್ಕದಲ್ಲಿದ್ದೇವೆ. ಇದಲ್ಲದೆ ರಾಷ್ಟ್ರೀಯ ನಾಯಕರಾದ ಗುಲಾಬ್ ನಭಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪಮೊಯ್ಲಿ, ಅಹಮ್ಮದ್ ಪಟೇಲ್ ಸೇರಿದಂತೆ ಮತ್ತಿತರರೊಂದಿಗೆ ಚರ್ಚೆ ನಡೆಸುತ್ತೇವೆ. ಸದ್ಯದಲ್ಲೇ ಸಂಪುಟ ವಿಸ್ತರಣೆಯೂ ಆಗಲಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ