ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತ

ಗೌರಿಬಿದನೂರು, ಮೇ 30- ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಚೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮಲಾಪುರ ಗ್ರಾಮದ ವಾಸಿ ಶಂಕರಪ್ಪ (39) ಮೃತ ಪಾದಚಾರಿ. ತಾಲ್ಲೂಕಿನ ತೊಂಡೇಬಾವಿ ಹೋಬಳಿ ಕಾಮಲಾಪುರ ಕ್ರಾಸ್ ಬಳಿ ಶಂಕರಪ್ಪ ಹೋಗುತ್ತಿದ್ದಾಗ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಬಸ್ ನಿಲ್ಲಿಸದೆ ಹೋಗಿದ್ದು, ಗ್ರಾಮಸ್ಥರು ಬಸ್ ಬೆನ್ನೆಟ್ಟಿದ್ದರಿಂದ ಯರ್ರಗುಂಟೆ ಗ್ರಾಮದ ಬಳಿ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಮಂಚೇನಹಳ್ಳಿ ಠಾಣೆಯ ಎಸೈ ಚಂದ್ರಶೇಖರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದಲೇ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ