ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಮೃತ

ದಕ್ಷಿಣ ಕನ್ನಡ, ಮೇ 30- ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ ಐದು ಲಕ್ಷ ರೂ. ಪರಿಹಾರ ವಿತರಿಸಿದರು.
ಮಳೆ ದುರಂತಕ್ಕೆ ಮೃತಪಟ್ಟ ಕೆಪಿಟಿ ಉದಯನಗರದ ಮೋಹಿನಿ ಮತ್ತು ಕೊಡಿಯಾಲ್ ಬೈಲï ಪಿವಿಎಸ್ ಕಲಾಕುಂಜ ಸಮೀಪದ ಮುಕ್ತ ಕುಟುಂಬಗಳಿಗೆ ಡಿಸಿ ಪರಿಹಾರ ನೀಡಿ ಸಾಂತ್ವನ ಹೇಳಿದರು.
ಹಲವೆಡೆ ಭೂಕುಸಿತ, ಮನೆ ಗೋಡೆ ಕುಸಿದಿದ್ದು, ಮರಗಳು ರಸ್ತೆಗುರುಳಿವೆ. ಬಹು ಮಹಡಿ ಕಟ್ಟಡ ಮತ್ತು ಮನೆಗಳ ಸುತ್ತ ನೀರು ನಿಂತು ಜನರು ರಕ್ಷಣೆಗೆ ಅಂಗಲಾಚುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಪಂಪ್ವೆಲ್ ಜಂಕ್ಷನ್ ಹಾಗೂ ಪಡೀಲ್ ರೈಲ್ವೇ ಅಂಡರ್ ಪಾಸ್‍ನಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿಕೊಂಡು ಸವಾರರು ಪರದಾಡುವಂತಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ