ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ: ಕಾಂಗ್ರೆಸ್‌ನ ಮುನಿರತ್ನ ಗೆಲುವು

ಬೆಂಗಳೂರು:ಮೇ-31 ರಾಜರಾಜೇಶ್ವರಿ ನಗರ(ಆರ್‌.ಆರ್‌.ನಗರ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ಡುಕೊಂಡ ಮುನಿರತ್ನ ಸಮೀಪ ಸ್ಪರ್ಧಿ ಬಿಜೆಪಿಯ ತುಳಸಿ ಮುನಿರಾಜುಗೌಡ ಅವರಿಗಿಂತ 40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

ಒಟ್ಟು 18 ಸುತ್ತುಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಧಿಕೃತ ಘೋಷಣೆ ಬಾಕಿಯಿದೆ. ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಸಲಾಗುತ್ತಿದೆ.

ಸಾವಿರಕ್ಕೂ ಹೆಚ್ಚು ನೋಟಾ ದಾಖಲಾಗಿದ್ದು, ಪಕ್ಷೇತರ ಅಭ್ಯರ್ಥಿಗಳ ಪೈಕಿ ಹುಚ್ಚ ವೆಂಕಟ್‌ ನೋಟಾಕ್ಕಿಂತಲೂ ಕಡಿಮೆ, 562 ಮತಗಳನ್ನು ಪಡೆದರು.

ಚುನಾವಣಾ ಅಕ್ರಮ ನಡೆದಿರುವ ಕಾರಣಕ್ಕೆ ಮೇ 15ರಂದು ನಡೆಯಬೇಕಿದ್ದ ಮತದಾನವನ್ನು ಮುಂದೂಡಲಾಗಿತ್ತು. ಇದೇ 28ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಶೇ 54.20 ರಷ್ಟು ಮತದಾನ ನಡೆದಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ