ಕಾಶ್ಮೀರ ಕಣಿವೆಯಲ್ಲಿ ರಂಜಾನ್ ಮಾಸದ ಕದನ ವಿರಾಮದ ದುರ್ಲಾಭ!

ಶ್ರೀನಗರ, ಮೇ31-ಕಾಶ್ಮೀರ ಕಣಿವೆಯಲ್ಲಿ ರಂಜಾನ್ ಮಾಸದ ಕದನ ವಿರಾಮದ ದುರ್ಲಾಭ ಪಡೆದು ವಿಧ್ವಂಸಕ ಕೃತ್ಯಗಳನ್ನು ಎಸಗಲು ಪಾಕಿಸ್ತಾನಿ ಬೆಂಬಲಿತ ಉಗ್ರರು ಹುನ್ನಾರ ನಡೆಸುತ್ತಿದ್ದಾರೆ.
ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಯೋಧರೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ಮೂಲಕ ಭಯೋತ್ಪಾದಕರ ದುಷ್ಕøತ್ಯ ಯತ್ನಗಳನ್ನು ವಿಫಲಗೊಳಿಸಲಾಗಿದೆ. ಖಾಜಿಯಾಬಾದ್ ಆರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಹತರಾದ ಆತಂಕವಾದಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಅಡಗಿರಬಹುದಾದ ಉಗ್ರರಿಗಾಗಿ ಶೋಧ ಮುಂದುವರಿದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ