ಕೆಎಸ್‍ಆರ್‍ಟಿಸಿ ಸಂಸ್ಥೆಯು ತಂಬಾಕು ನಿಷೇಧ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿ

 

ಬೆಂಗಳೂರು, ಜೂ.1- ಕೆಎಸ್‍ಆರ್‍ಟಿಸಿ ಸಂಸ್ಥೆಯು ತಂಬಾಕು ನಿಷೇಧ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಧೂಮಪಾನ ಮಾಡುವವರಿಂದ ಸುಮಾರು 1,14,997 ಪ್ರಯಾಣಿಕರಿಂದ 2.30 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.

ಸಾರ್ವಜನಿಕರು ಹಾಗೂ ನಿಗಮದ ಸಿಬ್ಬಂದಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ದೇಶದಲ್ಲಿ ಈವರೆಗೂ ಯಾವುದೇ ಸಾರಿಗೆ ನಿಗಮಗಳಲ್ಲಿ ಇಷ್ಟು ಕಟ್ಟುನಿಟ್ಟಾಗಿ ಧೂಮಪಾನ ನಿಷೇದವನ್ನು ಜಾರಿಗೊಳಿಸಿ, ಸಿಗರೇಟು ಹಾಗೂ ತಂಬಾಕಿನ ಮೇಲೆ ನೀರನ್ನು ಸುರಿಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕರಾರಸಾನಿಗಮವು ತಂಬಾಕು ಸೇವನೆಯನ್ನು ತಡೆಯಲು ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ವಿಭಾಗೀಯ ಕಛೇರಿಗಳು, ಘಟಕಗಳು, ಕಾರ್ಯಾಗಾರಗಳು, ತರಬೇತಿ ಕೇಂದ್ರಗಳಲ್ಲಿ ¿¿ಧೂಮಪಾನ ನಿಷೇಧಿತ ಪ್ರದೇಶ ಎಂದು ಘೋಷಿಸಿ ಇಲ್ಲಿ ಧೂಮಪಾನ ಮಾಡುವುದು ಅಪರಾಧ, ಉಲ್ಲಂಘನೆಯಾದಲ್ಲಿ 200ರೂ.ವರೆಗೆ ದಂಡ ವಿಧಿಸಲಾಗುವುದು ಎಂಬ ಫಲಕಗಳನ್ನು ಪ್ರದರ್ಶಿಸಲಾಗಿದೆ.
ಇದರ ಜೊತೆಗೆ ಸಂಸ್ಥೆಯ ಆವರಣದಲ್ಲಿ ಸಿಗರೇಟು ಹಾಗೂ ತಂಬಾಕು ವಸ್ತುಗಳ ಜಾಹೀರಾತನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಯು ಈ ಕಾಯಿದೆಯನ್ನು ಉಲ್ಲಂಘಿಸಿದಲ್ಲಿ ರೂ.200 ದಂಡವನ್ನು ಸ್ಥಳದಲ್ಲಿಯೇ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ