ಕ್ಯಾಬ್‍ಗಾಗಿ ಕಾಯುತ್ತಿದ್ದ ವ್ಯಕ್ತಿ ಬಳಿ ಬಂದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಎರಡು ಸಾವಿರ ಹಣ ಕಸಿದು ಪರಾರಿ

 

ಬೆಂಗಳೂರು, ಜೂ.2-ಕ್ಯಾಬ್‍ಗಾಗಿ ಕಾಯುತ್ತಿದ್ದ ವ್ಯಕ್ತಿ ಬಳಿ ಬಂದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಎರಡು ಸಾವಿರ ಹಣ ಕಸಿದು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಅಯ್ಯಪ್ಪನಗರದ ದೇವಸಂದ್ರ ಮುಖ್ಯರಸ್ತೆಯಲ್ಲಿ ಕರೀಂ ಪಾಷ ಎಂಬುವರು ಇಂದು ಬೆಳಗಿನ ಜಾವ 4.30ರಲ್ಲಿ ಕ್ಯಾಬ್‍ಗಾಗಿ ಕಾಯುತ್ತಿದ್ದರು.
ಈ ವೇಳೆ ಎರಡು ಬೈಕ್‍ಗಳಲ್ಲಿ ಬಂದ ನಾಲ್ವರು ದರೋಡೆಕೋರರು ಕರೀಂ ಪಾಷ ಅವರಿಗೆ ಬೆದರಿಸಿ ಎರಡು ಸಾವಿರ ರೂ. ಕಿತ್ತುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕ್ಯಾಬ್ ಬಂದಿದೆ. ಇದನ್ನು ಗಮನಿಸಿದ ದರೋಡೆಕೋರರು ಬೈಕ್‍ಗಳಲ್ಲಿ ಪರಾರಿಯಾಗಿದ್ದಾರೆ.

ತಕ್ಷಣ ಕರೀಂ ಪಾಷ ಅವರು ಕ್ಯಾಬ್‍ನಲ್ಲೇ ಅವರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದಾಗ ದರೋಡೆಕೋರರು ಗಮನಿಸಿ ಅತಿವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಒಂದು ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದರೋಡೆಕೋರರು ಕೆಳಗೆ ಬಿದ್ದಿದ್ದಾರೆ.
ಹಿಂಬಾಲಿಸಿಕೊಂಡು ಕ್ಯಾಬ್ ಬರುತ್ತಿದ್ದರಿಂದ ದರೋಡೆಕೋರರು ಬೈಕ್‍ನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಕೆ.ಆರ್.ಪುರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ