ಟೈರ್ ಸ್ಫೋಟ: ಇಬ್ಬರು ಮೃತ

ತುಮಕೂರು, ಜೂ.4- ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಪಾವಗಡದ ಐದು ಮಂದಿ ಯುವಕರು ಕಾರಿನಲ್ಲಿ ವಾಪಸಾಗುತ್ತಿದ್ದಾಗ ಟೈರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇವರ ಪೈಕಿ ಒಬ್ಬನ ರುಂಡ-ಮುಂಡ ಬೇರ್ಪಟ್ಟು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಳಾಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಾವಗಡ ಮೂಲದ ರಂಜಿತ್ (25) ಮತ್ತು ಸಂಜಯ್‍ಸಿಂಗ್ (20) ಮೃತಪಟ್ಟ ದುರ್ದೈವಿಗಳಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕುಮಾರ್, ಪ್ರಶಾಂತ್, ಅರ್ಬಾಸ್ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ನೆಲೆಸಿರುವ ಸ್ನೇಹಿತನ ಹುಟ್ಟುಹಬ್ಬಕ್ಕೆಂದು ಪಾವಗಡದಿಂದ ಇವರೆಲ್ಲರೂ ಕಾರಿನಲ್ಲಿ ತೆರಳಿದ್ದರು. ಪಾರ್ಟಿ ಮುಗಿಸಿಕೊಂಡು ಎಲ್ಲರೂ ತಡರಾತ್ರಿ ವಾಪಸಾಗುತ್ತಿದ್ದಾಗ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ತಣ್ಣೇನಹಳ್ಳಿ ಬಳಿ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಕಾರು ನಿಯಂತ್ರಣಕ್ಕೆ ಸಿಗದೆ ಅಡ್ಡಾದಿಡ್ಡಿ ಚಲಿಸಿ ಸಂಭವಿಸಿದ ಅಪಘಾತದಿಂದಾಗಿ ಕಾರು ಚಾಲನೆ ಮಾಡುತ್ತಿದ್ದ ರಂಜಿತ್‍ನ ರುಂಡ-ಮುಂಡ ಬೇರ್ಪಟ್ಟು ಸುಮಾರು 150 ಮೀಟರ್ ಅಂತರದಲ್ಲಿ ರುಂಡ ಹಾರಿ ಬಿದ್ದಿದೆ. ಸಂಜಯ್‍ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಾರಿನಲ್ಲಿದ್ದ ಉಳಿದವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೋಳಾಲ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ