ಸಾಲಭಾದೆಯಿಂದ ಮನನೊಂದ ರೈತ ಆತ್ಮಹತ್ಯೆಗೆ ಶರಣು

ಕಲಬುರ್ಗಿ:ಜೂ-5: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ಸೇಡಂ ಸೇಡಂ ತಾಲ್ಲೂಕು ಸಟಪಟನಹಳ್ಳಿಯಲ್ಲಿ ನಡೆದಿದೆ.

ಭಿಮರಾಯ ರಾಯಚೂರಕರ್ (55) ಮೃತ ರೈತರು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರು ವಿವಿಧ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳ ಬಳಿ 5 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸಲು ಆಗದೆ ಪರದಾಡುತ್ತಿದರು. ಅಲ್ಲದೆ ಸಾಲ ತೀರಿಸಲು ಎರಡು ಎಕರೆ ಜಮೀನು ಕೂಡ ಮಾರಾಟ ಮಾಡಿದ್ದರು. ಆದರೂ ಸಾಲ ತೀರಿರಲಿಲ್ಲ. ಉಳಿಕೆ ಸಾಲ ಪಾವತಿಸುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ