ಸಾಲಬಾಧೆಯಿಂದ ಮನನೊಂದಿದ್ದ ರೈತ ಆತ್ಮಹತ್ಯೆ

ಚಳ್ಳಕೆರೆ, ಜೂ.6- ಸಾಲಬಾಧೆಯಿಂದ ಮನನೊಂದಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸದುರ್ಗ ತಾಲೂಕಿನ ಹಾಲದಹಳ್ಳಿ ನಿವಾಸಿ ರಾಮಪ್ಪ (60) ಆತ್ಮಹತ್ಯೆ ಮಾಡಿಕೊಂಡ ರೈತ.
ಈತ ಫೈನಾನ್ಸ ಕಂಪನಿಯೊಂದರಲ್ಲಿ ಬೆಳೆ ಬೆಳೆಯಲೆಂದು 60 ಸಾವಿರ ರೂ ಸಾಲವನ್ನು ಪಡೆದಿದ್ದರು, ಆದರೆ ಬೆಳೆ ಬೆಳೆಯದೇ ಸಾಲ ತೀರಿಸಲು ಆಗದೇ ಮನನೊಂದಿದ್ದರು.
ಆದರೆ ಬ್ಯಾಂಕ್‍ನವರು ಸಾಲ ಹಿಂದಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು. ಇದರಿಂದ ಮನನೊಂದು ನಿನ್ನೆ ಮನೆಯಲ್ಲಿಯೇ ವಿಷ ಸೇವಿಸಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲುಮಾಡಲಾಯಿತು, ಆದರೆ ಚಿಕಿತ್ಸೆ ಫಲಾಕಾರಿಯಾಗದೇ ರಾತ್ರಿ ಮೃತಪಟ್ಟಿದ್ದಾರೆ.
ಹೊಸದುರ್ಗ ಪೆÇಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ