ಅಕ್ರಮ ಖಾತೆ ಮಾಡಿಕೊಟ್ಟಿರುವ ಆರೋಪದಡಿ ನಗರಸಭೆಯ ಇಬ್ಬರ ಅಮಾನತು

ಹಿರಿಯೂರು, ಜೂ.5- ಅಕ್ರಮ ಖಾತೆ ಮಾಡಿಕೊಟ್ಟಿರುವ ಆರೋಪದಡಿ ನಗರಸಭೆಯ ಇಬ್ಬರನ್ನು ಅಮಾನತುಗೊಳಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆ ಪೌರಾಯುಕ್ತ ರಮೇಶ್ ಸುಣಗಾರ್ ಮತ್ತು ವ್ಯವಸ್ಥಾಪಕ ನಾಸಿರ್ ಅಮಾನತುಗೊಂಡವರು. ನಿಯಮ ಉಲ್ಲಂಘಿಸಿ ಅಕ್ರಮ ಖಾತೆಗಳನ್ನು ಮಾಡಿಕೊಟ್ಟಿದ್ದಾರೆಂಬ ಆರೋಪ ಇವರಿಬ್ಬರ ವಿರುದ್ಧ ಕೇಳಿಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಸುಮಾರು 265 ಅಕ್ರಮ ಖಾತೆಗಳನ್ನು ನಿಯಮ ಉಲ್ಲಂಘಿಸಿ ಮಾಡಿರುವ ಆರೋಪದಡಿ ಇವರಿಬ್ಬರನ್ನು ಸಸ್ಪೆಂಡ್ ಮಾಡಿ ಡಿಸಿ ಅವರು ಆದೇಶ ಹೊರಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ