ಬೆಂಗಳೂರು, ಜೂ.6-ಯುವ ಉದ್ಯಮಿ ವಿದ್ವತ್ ಮೇಲೆ ಮಾರಕ ಹಲ್ಲೆ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರ ಮಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ.
ಹೈಕೋರ್ಟ್ ಏಕಸದಸ್ಯ ಪೀಠವು ಇಂದು ಮಹಮ್ಮದ್ ನಲಪಾಡ್ ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಈ ಪ್ರಕರಣದ ಅರ್ಜಿಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿದೆ.
ಮಹಮ್ಮದ್ ನಲಪಾಡ್ ಪರ ಹಿರಿಯ ವಕೀಲ ಬಿ.ಎನ್.ಆಚಾರ್ಯ ವಾದ ಮಂಡಿಸಿದರು.ಸರ್ಕಾರಿ ಅಭಿಯೋಜಕರು ಜೂ.11 ರಂದು ಈ ಸಂಬಂಧ ಆಕ್ಷೇಪಣಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.