ಹುಬ್ಬಳ್ಳಿ-
ಹುಬ್ಬಳ್ಳಿ ಧಾರವಾಡ ಪಾಲಿಕೆ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸದಸ್ಯರೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾರ್ಮಿಕರ ಗಂಭೀರ ಆರೋಪ ಮಾಡಿದರು.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪೌರಕಾರ್ಮಿಕ ಸಂಘದ ಅಧ್ಯಕ್ಷ ವಿಜಯ್ ಗುಂಟ್ರಾಳ್, ಬಿಜೆಪಿ ನಾಯಕರು ಪೌರ ಕಾರ್ಮಿಕರನ್ನಿ
ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ.
ಮನೆಕೆಲಸ ಮಾಡದಿದ್ದರೆ ಮೇಸ್ತ್ರಿ ಮೂಲಕ ಗುತ್ತಿಗೆ ಪೌರ ಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸಂಸದ ಪ್ರಲ್ಹಾದ್ ಜೋಶಿ ಸಹೋದರ ಗೋವಿಂದ ಜೋಶಿಯವರ ಮನೆ, ಪಾಲಿಕೆಯ ಸದಸ್ಯರಾದ ಶಿವಾನಂದ ಮುತ್ತಣ್ಣವರ ಮತ್ತು ವೀರಣ್ಣ ಸವಡಿ ಅವರ ಮನೆಯಲ್ಲಿ ಪೌರಕಾರ್ಮಿಕರನ್ನು ಒತ್ತಾಯಪೂರ್ವಕವಾಗಿ ಕೆಲಸ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ತಮ್ಮ ವಾರ್ಡ್ ಬಿಟ್ಟು ಬೇರೆ ಬೇರೆ ವಾರ್ಡ್ ಗಳಲ್ಲಿ ಕೆಲಸ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.