ಎಂಎಲ್ಸಿ ಎಚ್.ಎಂ.ರೇವಣ್ಣ ಅಸಮಾಧಾನ

 

ಬೆಂಗಳೂರು, ಜೂ.6-ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿನ್ನೆ ರಾತ್ರಿಯವರೆಗೂ ಸಚಿವ ಪಟ್ಟಿಯಲ್ಲಿದ್ದ ಹೆಸರು ಮಧ್ಯರಾತ್ರಿ ವೇಳೆಗೆ ಬದಲಾಗಿದೆ.ಈ ಬೆಳವಣಿಗೆ ತಮಗೆ ಆಘಾತ ತಂದಿದೆ ಎಂದು ಹೇಳಿದರು.

ಕುರುಬ ಸಮಾಜ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಷ್ಟ ಪಟ್ಟ ದುಡಿದಿದ್ದಕ್ಕೆ ನೀಡಿದ ಅಗೌರವ ಇದು ಎಂದಿರುವ ಅವರು, ಕುರುಬ ಹಾಗೂ ಮುಸ್ಲಿಂ ಸಮುದಾಯ ಕಾಂಗ್ರೆಸ್‍ಗೆ 100ಕ್ಕೆ ನೂರರಷ್ಟು ಮತ ನೀಡಿದೆ. ಈ ಎರಡೂ ಸಮುದಾಯಗಳಿಗೆ ಸಚಿವ ಸ್ಥಾನ ದೊರಕದಿರುವುದು ಅತೃಪ್ತಿ ತಂದಿದೆ ಎಂದು ತಿಳಿಸಿದರು.
ಎರಡೂ ಸಮಾಜಗಳನ್ನು ತುಳಿಯಲು ಕಾಣದ ಕೈಗಳು ಕೆಲಸ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ