ನಾಪತ್ತೆಯಾಗಿದ್ದ ಬಾಲಕರ ಪತ್ತೆ: ಪೋಷಕರ ಮಡಿಲು ಸೇರಿದ ಮಕ್ಕಳು

ಆನೇಕಲ್:ಜೂ-10: ನಿ‌ನ್ನೆ ಸಂಜೆ ಆನೇಕಲ್ ತಾಲೂಕಿನ ಮಂಚನಹಳ್ಳಿ ಗ್ರಾಮದಿಂದ ಕಾಣೆಯಾಗಿದ್ದ ಬಾಲಕರು ಸುಕಾಂತ್ಯವಾಗಿ ಪೋಷಕರ ಮಡಿಲು ಸೇರಿದ್ದಾರೆ.

ಗ್ರಾಮದ ಚಂದನ್(12), ವಿಕಾಸ್(12), ನಂದನ್(12) ಹಾಗೂ ಕಾರ್ತಿಕ್(14) ನಿನ್ನೆ ಸಂಜೆ ಪೋಷಕರಿಗೆ ತಿಳಿಸದೆ ಹೊಸೂರು ಬೆಟ್ಟಕ್ಕೆ ತೆರಳಿ ಅಲ್ಲಿ ಇದ್ದ ಹಣವನ್ನು ಖರ್ಚು ಮಾಡಿಕೊಂಡಿದ್ದಾರೆ. ನಂತರ ಮನೆಗೆ ಬರಲು ಹಣವಿಲ್ಲದೆ ಹೊಸೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ಇವರನ್ನು ಕಂಡ ಹೊಸೂರು ಪೊಲೀಸರು ವಿಚಾರಿಸಿದಾಗ ಘಟನೆಯನ್ನು ವಿವರಿಸಿದ್ದಾರೆ.

ನಂತರ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ ಹೊಸೂರು ಪೊಲೀಸರು ಕಳೆದ ರಾತ್ರಿ ಒಂದು ಗಂಟೆ ಸುಮಾರಿನಲ್ಲಿ ಮಕ್ಕಳನ್ನು ಅತ್ತಿಬೆಲೆ ಪೊಲೀಸರ ವಶಕ್ಕೆ ನೀಡಿದ ನಂತರ ಮಕ್ಕಳು ಪೋಷಕರ ಮಡಿಲು ಸೇರಿದ್ದು, ಪೋಲಿಸ್ ಇಲಾಖೆಗೆ ಮಕ್ಕಳ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ ಇನ್ನು ಮಕ್ಕಳ ಕಳ್ಳರು ಇವರನ್ನು ಕರೆದೊಯ್ದಿದ್ದಾರೆ ಎಂಬ ವದಂತಿಗೆ ಬ್ರೇಕ್ ಬಿದ್ದಂತಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ