ಶಾಸಕ ಎಂ ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಉಪವಾಸ ಸತ್ಯಾಗ್ರಹ

ವಿಜಯಪುರ: ಶಾಸಕ ಎಂ ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಎಂ ಬಿ ಪಾಟೀಲ್ ಅಭಿಮಾನಿಗಳು ಹಾಗೂ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ವಿಜಯಪುರ ತಾಲೂಕಿನ ಬಬಲೇಶ್ವರದಲ್ಲಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟದೆ. ಇನ್ನು ತಿಕೋಟಾ ದಲ್ಲಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಬಬಲೇಶ್ವರದ ಶ್ರೀ ಶಾಂತವೀರ ಸರ್ಕಲ್ ಹಾಗೂ ತಿಕೋಟಾದ ಶ್ರೀ ಬಸವೇಶ್ವರ ಸರ್ಕಲ್ ಗಳಲ್ಲಿ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಸತ್ಯಾಗ್ರಹಿಗಳು ಕೂಡಲೆ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಕಾಂಗ್ರೆಸ್ ಹೈ ಕಮಾಂಡ್ ಗೆ ಒತ್ತಾಯಿಸಿದ್ದಾರೆ.

ಅಲ್ಲದೇ ಎಂ ಬಿ ಪಾಟೀಲ್ ಗೆ ಸೂಕ್ತ ಸ್ಥಾನಮಾನ ಸಿಗುವ ವರೆಗೂ ಸತ್ಯಾಗ್ರಹ ಮುಂದುವರೆಸುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಿಳಿಸಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ