ಸಚಿವಸ್ಥಾನ ಸಿಗುವ ಭರವಸೆ ಇದೆ

ಹುಬ್ಬಳ್ಳಿ-

ಜಾತಿವಾರು, ಪ್ರಾದೇಶಿಕ, ಹಿರಿತನದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಗೋಳ ಕಾಂಗ್ರೆಸ್ ಶಾಸಕ ಸಿ ಎಸ್ ಶಿವಳ್ಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಸಚಿವ ಸ್ಥಾನ ಯಾಕೆ ಕೈತಪ್ಪಿತು ಗೊತ್ತಾಗಲಿಲ್ಲ. ಸಚಿವ ಸ್ಥಾನ ಸಮಾನವಾಗಿ ಹಂಚಿಕೆಯಾಗಬೇಕಿತ್ತು. ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕಕ್ಕೆ ಸಮಾನ ಅವಕಾಶ ನೀಡಬೇಕು. ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ