ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ: ಜೆ ಎನ್ ಯು ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್

ನವದೆಹಲಿ:ಜೂ-11: ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಹಿರಂಗದ ಬೆನ್ನಲ್ಲೇ ಶೆಹ್ಲಾ ರಶೀದ್ ಎಂಬುವರು ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿಕೆ ನೀಡಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್ ಟ್ವೀಟ್ ರ್ ನಲ್ಲಿ ಮಾಡಿರುವ ಈ ಆರೋಪ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ವಿರುದ್ಧದ ಈ ಅರೋಪಕ್ಕೆ ಪ್ರತಿಯಾಗಿ ಶೆಹ್ಲಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಶೆಹ್ಲಾ ತಮ್ಮ ಟ್ವೀಟರ್ ನಲ್ಲಿ ಆರ್ಎಸ್ಎಸ್ ಮತ್ತು ಗಡ್ಕರಿ ಅವರನ್ನು ನೋಡಿದರೆ ಮೋದಿ ಅವರನ್ನು ಕೊಲ್ಲಲು ಸಂಚು ರೂಪಿಸಿದವರಂತೆ ಕಾಣುತ್ತಾರೆ. ನಂತರ ಅದನ್ನು ಮುಸ್ಲಿಂ ಹಾಗೂ ಕಮ್ಯೂನಿಸ್ಟ್ ಗಳ ಮೇಲೆ ಹೊರಿಸಿ, ಬಳಿಕ ಮುಸ್ಲಿಂರನ್ನು ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಗಲ್ಲಿಗೇರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಟ್ವೀಟಿಸಿದ್ದಾರೆ.

RSS,Nitin Gadkari,PM Narendra Modi, Shehla Rashid, Twitter

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ