ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣ ಕ್ಷೇತ್ರದ ಜನರಿಗೆ ಕೃತಜ್ಞತೆ

ಮೈಸೂರು, ಜೂ.12 – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ನೇರ ನಗರಕ್ಕೆ ಆಗಮಿಸಿದ್ದು ವರುಣ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದರು.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಸ್ಥಳೀಯ ಕೆಲ ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು.
ಅಲ್ಲಿಂದ ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸಕ್ಕೆ ಸಿದ್ದರಾಮಯ್ಯ ಆಗಮಿಸಿದರು.
ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ಅವರ ನಿವಾಸದ ಬಳಿ ಜನ ಜಂಗಳಿ ನೆರೆದಿರುತ್ತಿತ್ತು, ಈಗ ಅವರ ನಿವಾಸದ ಬಳಿ ಯಾವುದೇ ಅಧಿಕಾರಿಗಳಾಗಲಿ, ಜನರಾಗಲಿ ಕಾಣಲಿಲ್ಲ, ಕುವೆಂಪು ನಗರದಲ್ಲಿರುವ ಗೋವಿಂದಯ್ಯ ಜಯಮ್ಮ ಕಲ್ಯಾಣ ಮಂಟಪದಲ್ಲಿ ವರುಣಾ ಕ್ಷೇತ್ರದ ಜನರಿಗೆ ಕೃತಜ್ಞತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಅಭೂತ ಪೂರ್ವ ಗೆಲವು ತಂದುಕೊಟ್ಟ ವರುಣಾ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಹಾಗೂ ಯತೀಂದ್ರ ಅಭಿನಂದನೆ ಸಲ್ಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ