ಎಚ್.ಕೆ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲು ಆಗ್ರಹ

 

ಬೆಂಗಳೂರು, ಜೂ.12- ನಾಲ್ಕು ಬಾರಿ ಪದವೀಧರ ಕ್ಷೇತ್ರ ಹಾಗೂ ಎರಡು ಬಾರಿ ಶಾಸಕರಾಗಿರುವ ಎಚ್.ಕೆ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಜಿಲ್ಲಾ ಪಂಚಾಯ್ತಿ ಒಕ್ಕೂಟದ ಅಧ್ಯಕ್ಷ ಕೊಟ್ರೇಶಪ್ಪ ಬಸವಣ್ಣಿ ಮತ್ತು ಜಿಪಂ ಅಧ್ಯಕ್ಷ ವಾಸಣ್ಣ ಕೊರಡಗಿ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಗಳು, ಈ ಹಿಂದೆ ಸಭಾನಾಯಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಮುಖ್ಯ ಸಚೇತಕರಾಗಿ ಸರಳ ಸಜ್ಜನಿಕೆಯ ರಾಜಕಾರಣ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ ಕೀರ್ತಿ ಎಚ್.ಕೆ.ಪಾಟೀಲ್ ಅವರಿಗೆ ಸಲ್ಲುತ್ತದೆ.
ಅವರಿಗೆ ಸಚಿವ ಸ್ಥಾನ ನೀಡಿದರೆ ಮುಂಬೈ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ. ಹಾಗಾಗಿ ಎಚ್.ಕೆ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ