ಬಜೆಟ್ ಪೂರ್ವ ಸಿದ್ಧತೆಯಲ್ಲಿ ಸಿಎಂ: ಜನತಾ ದರ್ಶನ ಮುಂದೂಡಕೆ

 

ಬೆಂಗಳೂರು, ಜೂ.12- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ಸಿದ್ಧತೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಜನತಾ ದರ್ಶನವನ್ನು ಮುಂದೂಡಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಮುಖ್ಯಮಂತ್ರಿ ಬದಲಾಗಿ ಅಧಿಕಾರಿಗಳು ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಜೆ.ಸಿ.ನಗರದ ನಿವಾಸಕ್ಕೆ ಆಗಮಿಸಿದ ಸಾರ್ವಜನಿಕರಿಂದ ಅಧಿಕಾರಿಗಳು ಅಹವಾಲು ಸ್ವೀಕರಿಸಿದರು. ಬಜೆಟ್ ಪೂರ್ವ ಸಿದ್ಧತೆಯಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಆಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಲಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೂಡ ಮುಖ್ಯಮಂತ್ರಿ ಭೇಟಿಯಾಗಲು ಜನರು ಆಗಮಿಸಿದ್ದರು. ಇಲ್ಲೂ ಕೂಡ ಸಾರ್ವಜನಿಕರಿಂದ ಅಧಿಕಾರಿಗಳು ಅಹವಾಲುಗಳನ್ನು ಸ್ವೀಕರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ