ಚಿರತೆ ದಾಳಿಗೆ ಕರು ಬಲಿ

ದಾಬಸ್‍ಪೇಟೆ, ಜೂ.12- ಚಿರತೆ ದಾಳಿಗೆ ಕರು ಬಲಿಯಾಗಿರುವ ಘಟನೆ ಸೋಂಪುರ ಹೋಬಳಿಯ ಕೆಂಗಲ್‍ಗ್ರಾಮದಲ್ಲಿ ನಡೆದಿದೆ.
ಕೆಂಗಲ್ ಗ್ರಾಮದ ರಾಮಣ್ಣ ಎಂಬರು ಹಸುಗಳನ್ನು ಮೇಯಿಸಲು ಹೊಲಕ್ಕೆ ಹೊಡೆದುಕೊಂಡು ಹೋಗಿದ್ದು, ಈ ವೇಳೆ ಸಂಜೆ 4.30ರ ಸಮಯದಲ್ಲಿ ದಿಢೀರನೆ ಕರು ಮೇಲೆ ಚಿರತೆ ದಾಳಿ ಮಾಡಿದೆ. ಇದನ್ನು ಕಂಡ ರಾಮಣ್ಣ ಚಿರತೆಯನ್ನು ಓಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.
ಕೆಂಗಲ್ ಗ್ರಾಮದಲ್ಲಿ ಚಿರತೆಗಳಂತಹ ಕಾಡು ಪ್ರಾಣಿಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ವಿಫಲವಾಗಿದ್ದು, ಗ್ರಾಮಸ್ಥರು ರಾತ್ರಿ ವೇಳೆ ಹೊರ ಹೋಗಲು ಭಯ ಪಡುವಂತಾಗಿದೆ.
ಕರು ಕಳೆದುಕೊಂಡ ರಾಮಣ್ಣನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ