ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ: ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಉದ್ಧತಟನ ತೋರಿದೆ. ಬುಧವಾರ ಬೆಳ್ಳಂಬೆಳಗ್ಗೆ ಪಾಕ್‌ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದು, ಇರದಲ್ಲಿ ಭಾರತದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಸಾಂಬಾ ಜಿಲ್ಲೆಯ ಚಂಬ್ಲಿಯಾಲ್ ಸೆಕ್ಟರ್‌‌ನಲ್ಲಿ ಇಂದು ಬೆಳಗಿನ ಜಾವ ಪಾಕ್‌ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರತ್ತ ಫೈರಿಂಗ್‌ ಮಾಡಿದ್ದಾರೆ. ಇದಕ್ಕೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ತಕ್ಷಣವೇ ಗುಂಡಿನ ಮೂಲಕವೇ ಪಾಕ್‌ಗೆ ತಕ್ಕ ಪ್ರತ್ಯುತ್ತರ ಕೊಟ್ಟಿದ್ದಾರೆ.
ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್‌ಎಫ್‌ನ ನಾಲ್ವರು ಯೋಧರು ವೀರ ಮರಣ ಹೊಂದಿದ್ದಾರೆ. ಹುತಾತ್ಮರಲ್ಲಿ ಬಿಎಸ್‌ಎಫ್‌ನ ಒಬ್ಬ ಸಹಾಯಕ ಕಮಾಂಡೆಂಟ್‌, ಸಬ್‌‌-ಇನ್ಸ್‌ಪೆಕ್ಟರ್‌ ಹಾಗೂ ಇಬ್ಬರು ಪೇದೆಗಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ