ಈ ವಾರ ತೆರೆಗೆ `ಕಟ್ಟುಕಥೆ’

ಅನಘ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸ್ವೀಟ್ಸ್ ಮಹದೇವ ಮೈಸೂರು ಅವರು ನಿರ್ಮಿಸಿರುವ `ಕಟ್ಟುಕಥೆ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎನ್.ಸವಿತ ಈ ಚಿತ್ರದ ಸಹ ನಿರ್ಮಾಪಕರು.

ರಾಜ್ ಪ್ರವೀಣ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಂ ಸುಬ್ರಮಣ್ಯ ಸಂಗೀತ ನೀಡಿದ್ದಾರೆ. ಮನು ಬಿ.ಕೆ ಛಾಯಾಗ್ರಹಣ ಹಾಗೂ ಗುರುಮೂರ್ತಿ ಹೆಗ್ಗಡೆ ಅವರ ಸಂಕಲನವಿರುವ ಈ ಚಿತ್ರಕ್ಕೆ `ಟಗರು` ಚಿತ್ರದ ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಮಹೇಶ್ ಜೆ ನೆರ್ಕರ್ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದ ಹಾಡುಗಳನ್ನು ರಾಜು ನಾಗನಗೌಡ ರಚಿಸಿದ್ದಾರೆ.

ಸೂರ್ಯ, ಸ್ವಾತಿ ಕೊಂಡೆ, ರಾಜೇಶ್ ನಟರಂಗ, ಮಿತ್ರ, ಕೆಂಪೇಗೌಡ, ಬೃನಾಲಿ ಶೆಟ್ಟಿ, ರಿಹಾಂಸಿ ಗೌಡ, ಸೂರ್ಯ ಕುಂದಾಪುರ, ಮೋಹನ್ ಜುನೇಜ, ನಟನ ಪ್ರಶಾಂತ್, ರಜನಿಕಾಂತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ