ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ರನ್ನು ಮೊದಲು ತನಿಖೆ ನಡೆಸಿ: ಸಿ.ಎಂ.ಇಬ್ರಾಹಿಂ

ಬೆಂಗಳೂರು:ಜೂ-16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೆಡ್ ಆಫೀಸ್. ಮೊದಲು ಮುತಾಲಿಕ್​ರನ್ನು ತನಿಖೆ ನಡೆಸಿ ಎಂದು ಕಾಂಗ್ರೆಸ್​ನ ವಿಧಾನ ಪರಿಷತ್​ ಸದಸ್ಯ​ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ರಂಜಾನ್​ ಪ್ರಾರ್ಥನೆ ವೇಳೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪರಶುರಾಮ್​ ವಾಗ್ಮೋರೆ ಬಂಧನ ವಿಚಾರದ ಕುರಿತು ಮಾತನಾಡಿದ ಅವರು, ಬಂಧಿತ ಯುವಕ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದು, ಈತನ ಹಿಂದಿರುವ ದುಷ್ಟ ಶಕ್ತಿಯನ್ನು ಪತ್ತೆ ಹಚ್ಚಬೇಕು. ಕಾಯಿಲೆಗೆ ಮದ್ದು ಕಂಡು ಹಿಡಿದರೆ ಸಾಲುವುದಿಲ್ಲ. ಅದಕ್ಕೆ ಕಾರಣವಾದದ್ದನ್ನು ಪತ್ತೆ ಮಾಡಬೇಕು ಎಂದರು.

ಇಸ್ಲಾಂ ಧರ್ಮ ಪಾಪಿಯನ್ನು ಖಂಡಿಸುವುದಿಲ್ಲ. ಪಾಪವನ್ನು ಖಂಡಿಸುತ್ತದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ಜನರ ಜೀವನದಲ್ಲಿ ಹುಳಿ ಹಿಂಡಿರುವ ಪ್ರಮೋದ್ ಮುತಾಲಿಕ್ ಯಾವ ಮುಖ ಇಟ್ಟುಕೊಂಡು ದೇವರ ಬಳಿ ಹೋಗುತ್ತಾರೆ ಎಂದರು.

ದೇವರ ಬಳಿ ಟಿಕೆಟ್ ಪಡೆದು ಏರ್​ಪೋರ್ಟ್​ನಲ್ಲಿರುವ ಮುತಾಲಿಕ್ ಬಗ್ಗೆ ನನಗೆ ತುಂಬಾ ನೋವಿದೆ. ಅವರು ಇನ್ನಾದರೂ ಪಶ್ಚಾತಾಪ ಪಟ್ಟು ಸನ್ಮಾರ್ಗದಲ್ಲಿ ಬದುಕಲಿ ಎಂದರು. ಇದೇ ವೇಳೆ ಕಲಬುರ್ಗಿ ಹತ್ಯೆ ಆರೋಪಿಗಳನ್ನು ಪೋಲಿಸ್ ಕೂಡಲೇ ಬಂಧಿಸಬೇಕು ಎಂದಿದ್ದಾರೆ.

Gouri lankesh murder case,sriramasene,pramod mutalik,c.m.ibrahim

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ