ಪೊಲೀಸ್ ಮಿಂಚಿನದಾಳಿ- ಅಕ್ರಮ ಶಶ್ತ್ರಾಸ್ತ್ರ ಪತ್ತೆ

ಹುಬ್ಬಳ್ಳಿ- ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿರುವ ದೂರು ಹಿನ್ನೆಲೆ, ರೌಡಿ ಶೀಟರ್‌ಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ಮಿಂಚಿನ ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಜನ್ಮದಿನದಂದು ತಲ್ವಾರ್ ನಿಂದ ಕೇಕ್ ಕತ್ತರಿಸುವ ಟ್ರೆಂಡ್ ಇತ್ತೀಚೆಗೆ ಪ್ರಾರಂಭಾಗಿತ್ತು. ಈ ಸಂಬಂಧ ಪೊಲೀಸ್ ಇಲಾಖೆ ಕೂಡ ಸಾಕಷ್ಟು ಕ್ರಮ ಜರುಗಿಸುತ್ತಿದೆ. ಆದರೆ, ಈ ತಲ್ವಾರ್ ನಿಂದ ಕೇಕ್ ಕತ್ತರಿಸುವ ಹೊಸಮಾದರಿಯ ಹುಚ್ಚ ನಿಲ್ಲುವಂತೆ ಕಾಣುತ್ತಿಲ್ಲ. ಹೀಗಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ್ ನೇತೃತ್ವದಲ್ಲಿ ಡಿಸಿಪಿ ರೇಣುಕಾ ಸುಕುಮಾರ, ಎಸಿಪಿ ಸಕ್ರಿ ಸೇರಿದಂತೆ ಸಿಬ್ಬಂದಿಯೊಂದಿಗೆ ಹುಬ್ಬಳ್ಳಿಯ ಹೊಸೂರು, ಸೆಟ್ಲಮೆಂಟ್ , ಆರ್‌ಜಿಎಸ್, ಬೆಂಗೇರಿ ಹಳೇ ಹುಬ್ಬಳ್ಳಿಯ ಶಿವಶಂಕರ ಕಾಲೋನಿ ಸೇರಿದಂತೆ ವಿವಿದೆಡೆ‌ ದಾಳಿ ನಡೆಸಿದ್ದಾರೆ. ರೌಡಿಗಳ ಮನೆಗಳನ್ನು ಜಾಲಾಡಿದ ಪೊಲೀಸ್ ಅಧಿಕಾರಿಗಳಿಗೆ ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗುವೆ. ಅಷ್ಟೇ ಅಲ್ಲದೇ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಕೂಡ ಸಿಕ್ಕಿಬಿದ್ದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ