ಸಿಎಂ ರಾಜೀನಾಮೆ ಕೇಳಿದ ಪೊಲೀಸ್ ಪೇದೆ


ಹುಬ್ಬಳ್ಳಿ- ಸಮಾಜದ ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಪೇದೆಯೋರ್ವ ಬಿಜೆಪಿ ಕಾರ್ಯಕರ್ತನಂತೆ ವರ್ತಿಸಿ, ಕುಮಾರಸ್ವಾಮಿಯವರೇ ರಾಜೀನಾಮೆ‌ ಯಾವಾಗ ಎಂಬ ಪೋಸ್ಟ್ ನ್ನು ಫೆಸಬುಕ್ ನಲ್ಲಿ ಶೇರ್ ಮಾಡುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ್ದಾರೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಪೇದೆ ಅರಣ ಡೊಳ್ಳಿನ ತಮ್ಮ ಫೇಸ್ ಬುಕ್ ಅಕೌಂಟನಲ್ಲಿ, ಕುಮಾರಸ್ವಾಮಿ ಅವರೇ 18 ದಿನ ಕಳೆದ್ರು ಸಾಲಮನ್ನಾ ಮಾಡಿಲ್ಲ. ರಾಜೀನಾಮೆ ಯಾವಾಗ ಎಂಬ ಪೋಸ್ಟ್ ಶೇರ್ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್- ಜೆಡಿ ಎಸ್ ಪಕ್ಷದ ವಿರುದ್ದ ಅಪಪ್ರಚಾರದ ಪೋಸ್ಟ್ ಕೂಡ ಶೇರ್ ಮಾಡಿದ್ದಾರೆ. ಬಿಜೆಪಿ ಪರವಾಗಿ ಪ್ರಚಾರ ಮಾಡಿ ಜೆಡಿಎಸ್-ಕಾಂಗ್ರೆಸ್ ವಿರುದ್ದ ಅಪಪ್ರಚಾರದ ಪೋಸ್ಟ್ ಮಾಡಿದ್ದು, ಈ ಹಿಂದೆ ಕೂಡಾ ಹಲವಾರು ವಿಡಿಯೋ ಗಳನ್ನು ಶೇರ್ ಮಾಡಿರುವ ಬಗ್ಗೆ ಬೆಳಕಿಗೆ ಬಂದಿದೆ. ಬಿಜೆಪಿ ಕಾರ್ಯಕರ್ತರ ರೀತಿ ಪ್ರಚಾರ ಮಾಡುತ್ತಿರೋ ಪೇದೆಯ ಕೃತ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ