ಪೆಟ್ರೋಲ್ ಟ್ಯಾಂಕರ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮನೆ ಭಸ್ಮ, ಓರ್ವ ಸಜೀವ ದಹನ

Varta Mitra News

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು, ಓರ್ವ ಸಜೀವವಾದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.

ಕಡೂರಿನಿಂದ ಹೊಸದುರ್ಗ ಕಡೆಗೆ ಪೆಟ್ರೋಲ್ ಟ್ಯಾಂಕರ್ ಹೋಗುತ್ತಿತ್ತು. ಈ ವೇಳೆ ಲಾರಿ ಪಕ್ಕದಲ್ಲೇ ಬೈಕ್ ಬಂದಿದ್ದು, ಅಪಘಾತ ತಡೆಯಲು ಹೋಗಿ ಲಾರಿ ಪಲ್ಟಿ ಆಗಿದೆ. ಬೈಕ್ ಮೇಲೆ ಪೆಟ್ರೋಲ್ ಟ್ಯಾಂಕರ್ ಬಿದ್ದಿದೆ.

ಬೈಕಿನ ಮೇಲೆ ಬಿದ್ದ ಬಳಿಕ ಟ್ಯಾಂಕರ್ ಹೊತ್ತಿ ಉರಿದಿದೆ. ಹೊತ್ತು ಉರಿಯುತ್ತಿದ್ದಂತೆ ಕ್ಲೀನರ್ ಸ್ಥಳದಲ್ಲೇ ಸಜೀವ ದಹನವಾಗಿದ್ದರೆ. ಚಾಲಕ ಮೈತುಂಬಾ ಬೆಂಕಿ ಮೆತ್ತಿಕೊಂಡೇ ಓಡಿ ಬಂದಿದ್ದಾನೆ. ಸ್ಥಳೀಯರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಳೆ ಬಂದಿದ್ದ ಕಾರಣ ಲಾರಿ ಪಲ್ಟಿ ಹೊಡೆದಿದೆ. ಅಕ್ಕಪಕ್ಕದಲ್ಲಿ ಮನೆ ಇದ್ದ ಕಾರಣ 10ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿದೆ. 5 ಅಗ್ನಿ ಶಾಮಕ ದಳ ವಾಹನಗಳು ಈಗ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ.

ಸುಮಾರು 100 ಮೀ. ವ್ಯಾಪ್ತಿಯಲ್ಲಿ ಬೆಂಕಿ ಆವರಿಸಿದ್ದು, ಸದ್ಯ ಅಕ್ಕಪಕ್ಕದ ಮನೆಯಲ್ಲಿದ್ದವರು ಹಿಂದಿನ ಬಾಗಿಲಿನಿಂದ ಹೊರ ಬಂದಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ