ಹವ್ಯಕ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶಿರಸಿ :
ಪ್ರತಿ ವರ್ಷದಂತೆ ಹವ್ಯಕ ಕ್ಷೇಮಾಭಿವೃದ್ಧಿ ಟ್ರಸ್ಟ್ (ರಿ) , ಶಿರಸಿ. ಇದರ ಅಡಿಯಲ್ಲಿ ದಿನಾಂಕ: 16-07-2018 ರಂದು ಸೋಮವಾರ 4-00 ಗಂಟೆಗೆ ಶ್ರೀ ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳಿಂದ ಪುರಸ್ಕರಿಸಲಾಗುವುದು. ಕಾರಣ, ಶಿರಸಿ ತಾಲೂಕಿನ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡಿ 2017-18ನೇ ಸಾಲಿನಲ್ಲಿ ಜರುಗಿದ ಎಸ್. ಎಸ್. ಎಲ್. ಸಿ. ಮತ್ತು ,ಪಿ.ಯು.ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಲ್ಲದೆ ಸಂಸ್ಕೃತ ಸಾಹಿತ್ಯ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ಆಸಕ್ತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಪೂರ್ಣ ವಿಳಾಸ ಹಾಗೂ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಯನ್ನು ನಮೂದಿಸಿದ ಸ್ವ ಲಿಖಿತ ಅರ್ಜಿಯೊಂದಿಗೆ ಅಂಕಪಟ್ಟಿ ಹಾಗೂ ವರ್ಗಾವಣಾ ಪತ್ರದ ಝೆರಾಕ್ಸ್ ಪ್ರತಿಯನ್ನು ಲಗತ್ತಿಸಿ ಐ. ಪಿ. ಹೆಗಡೆ, ಆದರ್ಶ ನಿಲಯ, ಖೂರ್ಸೆ ಕಂಪೌಂಡ್, 3ನೇ ಕ್ರಾಸ್, ಬನವಾಸಿ ರಸ್ತೆ, ಶಿರಸಿ -581401. ಈ ವಿಳಾಸಕ್ಕೆ ಅಂಚೆಯ ಮೂಲಕ ದಿನಾಂಕ: 30-06-2018 ರ ಒಳಗಾಗಿ ತಲುಪುವಂತೆ ಕಳುಹಿಸುವುದು . ಅವಧಿಯ ನಂತರ ಬಂದ ಅರ್ಜಿಯನ್ನು ಹಾಗೂ ಅಪೂರ್ಣವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರತಿಭಾಪುರಸ್ಕಾರಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದೂರವಾಣಿಯ ಮೂಲಕ ಸಮಾರಂಭಕ್ಕೆ ಆಗಮಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶಿವಾನಂದ ದೀಕ್ಷಿತ್ ಕಾರ್ಯಾಧ್ಯಕ್ಷರು, ಮೊ: 9448569464 ಅಥವಾ ಐ.ಪಿ. ಹೆಗಡೆ, ಕಾರ್ಯದರ್ಶಿ 9916812624. ಇವರನ್ನು ಸಂಪರ್ಕಿಸಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ