ರೈತರ ಸಾಲಮನ್ನಾ, ಮಹದಾಯಿ ವಿವಾದ ಇತ್ಯರ್ಥಕ್ಕೆ ಆಗ್ರಹ

Varta Mitra News

ಹುಬ್ಬಳ್ಳಿ- ರೈತರ ಸಾಲಾ ಮನ್ನಾ ಹಾಗೂ ಮಹದಾಯಿ ವಿವಾದ ಇತ್ಯರ್ಥಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಸೇರಿದ ಮಹದಾಯಿ ಕಳಸಾ ಮತ್ತು ಬಂಡೂರಿ ಸಮನ್ವಯ ಸಮಿತಿಯ ಕಾರ್ಯಕರ್ತರು, ಬೇಡಿಕೆ ಈಡೇರಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. ರೈತರ ಸಮಸ್ಯೆಗೆ ಕಿವಿಗೊಡದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ರೈತರ ಸಾಲಾ ಮನ್ನಾ ಹಾಗೂ ಮಹದಾಯಿ ವಿವಾದ ಬಗೆಹರಿಸುವಂತೆ ಒತ್ತಾಯಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ