ಪತ್ನಿಯನ್ನು ಹತ್ಯೆಗೈದು ಮಕ್ಕಳೊಂದಿಗೆ ತಲೆಮರೆಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಬಂಧನ

 

ಬೆಂಗಳೂರು,ಜೂ.22- ಕೌಟುಂಬಿಕ ಕಲಹದಿಂದ ಪತ್ನಿಯನ್ನು ಗುಂಡು ಹಾರಿಸಿ ಹತ್ಯೆಗೈದು ಮಕ್ಕಳೊಂದಿಗೆ ತಲೆಮರೆಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗಣೇಶ್‍ನನ್ನು ಜಯನಗರ ಠಾಣೆ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಉದ್ಯಮಿಯ ಇಬ್ಬರು ಮಕ್ಕಳಿಗೂ ಗುಂಡೇಟು ತಗುಲಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿ ಕನಕಪುರ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದು ಹೆಣ್ಣು ಹಾಗೂ ಒಂದು ಗಂಡು ಮಗುವಿಗೆ ಗುಂಡು ಯಾವಾಗ ತಗುಲಿತು ಎಂಬ ಬಗ್ಗೆ ಪೆÇಲೀಸರು ಆರೋಪಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಜಯನಗರದ 4ನೇ ಬ್ಲಾಕ್ 8ನೇ ಮುಖ್ಯರಸ್ತೆಯಲ್ಲಿ ಪತ್ನಿ ಸಹನಾ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಗಣೇಶ್, ಕೆಲ ದಿನಗಳ ಹಿಂದಷ್ಟೇ ಒಂದು ಮಗುವನ್ನು ದತ್ತು ಪಡೆದಿದ್ದರು.

ಈ ನಡುವೆ ದಂಪತಿ ಮಧ್ಯೆ ಕೌಟುಂಬಿಕ ವಿಚಾರವಾಗಿ ಮನಃಸ್ತಾಪ ಉಂಟಾಗಿ ಜಗಳ ನಡೆದಿತ್ತು. ನಿನ್ನೆ ರಾತ್ರಿ ಪುನಃ ದಂಪತಿ ನಡುವೆ ಜಗಳ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಈ ಹಂತದಲ್ಲಿ ಸಹನೆ ಕಳೆದುಕೊಂಡ ಗಣೇಶ್, ಪತ್ನಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ ಮಕ್ಕಳನ್ನು ಕರೆದುಕೊಂಡು ರಾತ್ರಿಯೇ ಕಾರಿನಲ್ಲಿ ಪರಾರಿಯಾಗಿದ್ದರು.
ಸುದ್ದಿ ತಿಳಿದು ಜಯನಗರ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಆರೋಪಿ ಗಣೇಶ್ ಪತ್ತೆಗಾಗಿ ಶೋಧ ಕೈಗೊಂಡಿದ್ದರು.
ಇಂದು ಬೆಳಗ್ಗೆ ಈತ ರಾಮನಗರ ಜಿಲ್ಲೆ ಬಿಡದಿ ಬಳಿಯ ಬನಗಿರಿಯಲ್ಲಿ ನೀರಿನ ಬಾಟಲ್ ತೆಗೆದುಕೊಳ್ಳಲು ಹೋದಾಗ ಪೆÇಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ