ಮೂರು ಮಂದಿ ಸಚಿವರಿಂದ ಇಂದು ಕಚೇರಿಗಳಲ್ಲಿ ಪೂಜೆ ಸಲ್ಲಿಸಿ ಕಾರ್ಯಾರಂಭ

 

ಬೆಂಗಳೂರು, ಜೂ.22- ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಮೂರು ಮಂದಿ ಸಚಿವರು ಇಂದು ತಮ್ಮ ಕಚೇರಿಗಳಲ್ಲಿ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು.
ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 344, 345ರಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಮ್ಮ ಕುಟುಂಬದವರೊಂದಿಗೆ ಪೂಜೆ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ವಿಧಾನಸೌಧದ ಕೊಠಡಿ ಸಂಖ್ಯೆ 339ರಲ್ಲಿ ಪೂಜೆ ಸಲ್ಲಿಸಿ ಸಚಿವರಾಗಿ ಕಾರ್ಯಾರಂಭ ಮಾಡಿದರು.
ಅರಣ್ಯ ಸಚಿವ ಶಂಕರ್ ಅವರು ವಿಕಾಸಸೌಧದ ಕೊಠಡಿ ಸಂಖ್ಯೆ 445ರಲ್ಲಿ ಪೂಜೆ ನೆರವೇರಿಸಿ ಸಚಿವರಾಗಿ ಕೆಲಸ ಶುರು ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ