ಯಾತ್ರಿಕರ ಮೇಲೆ ಕಾಡಾನೆ ದಾಳಿ: 6 ಜನರಿಗೆ ಗಾಯ

ಮಂಗಳೂರು:ಜೂ-23: ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರ ಮೇಲೆ ಕೈಕಂಬ ಬಳಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಆನೆ ದಾಳಿಗೆ ಸಿಲುಕಿ ಆರು ಮಂದಿ ಯಾತ್ರಿಕರು ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಮಾರುತಿ ಒಮ್ನಿ ವ್ಯಾನ್‌ ಸಂಪೂರ್ಣ ಜಖಂಗೊಂಡಿದೆ.

ಶನಿವಾರ ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಹಿಂಬದಿ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕ ಜೋರಾಗಿ ಹಾರನ್ ಮಾಡಿದ್ದರಂತೆ ಆನೆ ಕಾಡಿನತ್ತ ನುಗ್ಗಿದೆ.

ಕಾರಿನಲ್ಲಿ ಒಟ್ಟು 8 ಮಂದಿ ಪ್ರಯಾಣಿಸುತ್ತಿದ್ದರು. ಯಾತ್ರಿಕರೆಲ್ಲರೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನವರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Mangalore, Elephant Attack,Kaikamba

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ